ಹೊಸ ಕುಮಾರಕೃಪಾ ಅತಿಥಿಗೃಹವು ಬೆಂಗಳೂರು ನಗರದ ಮಧ್ಯದಲ್ಲಿದ್ದು, ಇದು 18 ರಂಧ್ರಗಳ ಗಾಲ್ಫ್ ಕೋರ್ಸ್ನ ಪಕ್ಕದಲ್ಲಿದೆ. ಹೊಸ ಕುಮಾರಕೃಪಾ ಅತಿಥಿಗೃಹವು ಇಸಿಬಿಎ ಸೇರಿದಂತೆ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುತ್ತದೆ. ಭಾರತ ಸರ್ಕಾರದ ವಿದ್ಯುತ್ ಸಚಿವಾಲಯವು ಕಟ್ಟಡ ಕ್ಷೇತ್ರದಲ್ಲಿ ಇಂಧನ ದಕ್ಷತೆಯನ್ನು ಉತ್ತೇಜಿಸಲು ಮೊದಲ ಹೆಜ್ಜೆಯಾಗಿ ಶಕ್ತಿ ಸಂರಕ್ಷಣಾ ಕಟ್ಟಡ ಕೋಡ್ (ಇಸಿಬಿಸಿ) ಅನ್ನು 2007ರ ಮೇ ತಿಂಗಳಿನಲ್ಲಿ ಪ್ರಾರಂಭಿಸಲಾಯಿತು ಮತ್ತು ಕುಮಾರಕೃಪಾ ಅತಿಥಿಗೃಹ ಹೊಸ ಕಟ್ಟಡವು ಕರ್ನಾಟಕದಲ್ಲಿ ಈ ವೈಶಿಷ್ಟ್ಯವನ್ನು ಮೊದಲನೆಯದಾಗಿ ಅಳವಡಿಸಿಕೊಂಡಿದೆ. ಸಂಪೂರ್ಣ ಅತಿಥಿಗೃಹದಲ್ಲಿ ಸಂವೇದಕ ಎಲ್.ಇ.ಡಿ ಲೈಟ್ಸ್ ಗಳನ್ನು ಹಾಗೂ ಉಷ್ಣಾಂಶ ಮತ್ತು ಶೀತಲತೆಯು ತಾಪಮಾನವನ್ನು ಸರಿದೂಗಿಸಲು ವೆರಿಯೇಬಲ್ ರೆಫ್ರಿಜರೇಟರ್ ಪ್ಲೋ ವನ್ನು ಅಳವಡಿಸಲಾಗಿರುತ್ತದೆ.
ಅತಿಥಿಗೃಹವು ಡಿಲಾಕ್ಸ್ ರೂಮ್ಗಳನ್ನು ಹೊಂದಿದ್ದು, ವಿಶಾಲವಾದ ಮಲಗುವ ಕೋಣೆ ಮತ್ತು ಸ್ನಾನಗೃಹವನ್ನು ಹೊಂದಿದ್ದು, ಎಲ್.ಇ.ಡಿ ಟಿ.ವಿ, ಕೇಂದ್ರೀಕೃತ ಎ.ಸಿಯೊಂದಿಗೆ ಬಿಸಿ ನೀರಿನ ವ್ಯವಸ್ಥೆಗೆ ಸೋಲಾರ್ ಹಾಗೂ ಹೀಟ್ ಪಂಪ್ನ್ನು ಅಳವಡಿಸಲಾಗಿರುತ್ತದೆ. 24 ಗಂಟೆಗಳ ಸ್ವಾಗತ ಕೌಂಟರ್, ರೆಸ್ಟೋರೆಂಟ್, ಕೊಠಡಿ ಸೇವೆಯೊಂದಿಗೆ ಜಿಮ್, ಗ್ರಂಥಾಲಯ, ವ್ಯಾಪಾರ ಕೇಂದ್ರ, ಪತ್ರಿಕೆಗಳು, ಟಿ.ವಿ ಚಾನೆಲ್ಗಳು, ವೇಕಪ್ ಕರೆ, ವಾಹನಗಳ ಪಾರ್ಕಿಂಗ್, ಹೌಸ್ಕೀಪಿಂಗ್ ಸೇವೆ, ಲಾಂಡ್ರಿ ಸೇವೆ, ವೈದ್ಯಕೀಯ ವ್ಯವಸ್ಥೆ, ವೀಲ್ ಚೇರ್, ವೈಟಿಂಗ್ ಲಾಂಗ್, ಗಾರ್ಡನ್ ಗಳ ಸೌಲಭ್ಯವನ್ನು ಹೊಂದಿರುತ್ತದೆ.
ಮಾಲಿನ್ಯ ಹಾಗೂ ಅವ್ಯವಸ್ಥೆಯಿಂದ ದೂರು ಉಳಿದಿರುವ ಪ್ರದೇಶವೆಂದರೆ ಮಡಿಕೇರಿ. ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಸ್ವರ್ಗದಂತೆ ಭಾಸವಾಗುವುದಲ್ಲದೇ ಪ್ರಕೃತಿಯೊಂದಿಗೆ ನಮ್ಮನ್ನು ಬೆಸೆಯುತ್ತದೆ.
ಯಾವುದೇ ಕಾಲಮಾನದಲ್ಲಿ ಭೇಟಿ ನೀಡಿದರೂ ಉತ್ತಮ ಅನುಭವ ನೀಡುತ್ತದೆ. ದಟ್ಟವಾದ ಅರಣ್ಯದ ಲವ್ಲಿ ಗಿರಿದಾಮದಲ್ಲಿ ಮಡಿಕೇರಿ ನೆಲೆಸಿದ್ದು, ಉತ್ತಮ ಕಾಫೀ ತೋಟ ಮತ್ತು ಆಶ್ವರ್ಯಕರ ಜಲಪಾತವನ್ನೊಳಗೊಂಡ ಮಡಿಕೇರಿಯು ತನ್ನ ಸಾಂಪ್ರದಾಯಕ ರುಚಿಯ ಪಾಕಪದ್ದತಿಯನ್ನು ಹೊಂದಿದೆ. ಕೊಡಗು ಜಿಲ್ಲೆಯ ಆಕರ್ಷಕ ರಾಜಧಾನಿಯಾದಂತಹ ಮಡಿಕೇರಿಯು ಪ್ರಾಚೀನ ಕಾಲದ ಆಕರ್ಷಕ ನೋಟವನ್ನು ಹೊಂದಿದೆ ಹಾಗೂ ರೆಡ್ ರೂಫಡ್ ಗುಂಪು ಸಮುದಾಯ ಮತ್ತು ಉತ್ತಮ ಮಾರುಕಟ್ಟೆಯನ್ನು ಸಹ ಹೊಂದಿದೆ.
ಮಡಿಕೇರಿಯು ಸಾಕಷ್ಟು ಪಿಕ್ನಿಕ್ ಸ್ಥಳಗಳನ್ನು ಒದಗಿಸುದಲ್ಲದೇ, ಕೆಲವೊಂದು ಆಸಕ್ತÀ ಚಟುವಟಿಕೆಗಳಾದ ಟ್ರಕ್ಕಿಂಗ್, ಬೆಟ್ಟ ಹತ್ತುವುದು ಹಾಗೂ ನದಿಯಲ್ಲಿನ ದೋಣಿ ವಿಹಾರ ಇತ್ಯಾದಿಗಳನ್ನು ಸಹ ಒದಗಿಸುತ್ತದೆ.
ಮಡಿಕೇರಿ ಬೆಟ್ಟದ ಅಂಚಿನಲ್ಲಿರುವ ಹೋಟೆಲ್ ಮಯೂರ ವ್ಯಾಲಿ ವ್ಯೂ ಮಡಿಕೇರಿ ಘಟಕವು ಸದರಿ ಸ್ಥಳದ ಆಕರ್ಷಕ ನೋಟವನ್ನು ಸವಿಯಲು ಉತ್ತಮ ಸ್ಥಳವಾಗಿದೆ.
ವ್ಯಾಲಿ ವ್ಯೂ ಮಡಿಕೇರಿ ಹೋಟೆಲ್ ಒಟ್ಟು 35 ಹವಾ ನಿಯಂತ್ರಿತ ಕೊಠಡಿಗಳು ಮತ್ತು ಉತ್ತಮ ದರ್ಜೆಯ ಡಬಲ್ ಬೆಡ್ ಕೊಠಡಿಗಳನ್ನು ಹೊಂದಿದೆ. ಬಾರ್ ವ್ಯವಸ್ಥೆಯನ್ನೊಳಗೊಂಡ ರೆಸ್ಟೋರೆಂಟ್ ಹೊಂದಿದ್ದು, ಕೊಡಗು ಶೈಲಿಯ ಪಾಕಪದ್ಧತಿಯನ್ನು ಅಳವಡಿಸಲಾಗಿರುತ್ತದೆ. ಅಲ್ಲದೇ, ಘಟಕಕ್ಕೆ ಬರುವ ಪ್ರವಾಸಿಗರಿಗೆ ಮಡಿಕೇರಿ ಸುತ್ತಮುತ್ತಲಿನ ಸ್ಥಳ ವೀಕ್ಷಣೆಯ ಸೌಲಭ್ಯವನ್ನು ಹೊಂದಿದ್ದು, ಉತ್ತಮ ಸವಿನೆನಪುಗಳನ್ನು ಕಲೆಹಾಕಬಹುದು.
Srirangapatna, the land of brave kings, remarkable history and spectacular architecture, is an island town celebrated for its ancient Ranganathaswamy Temple and the Gumbaz, where Tipu Sultan and his father Hyder Ali are buried. However, the former capital of the Maharajas of Mysuru is not just about palaces, forts, dungeons and mosques, rather its verdant surroundings will leave you mesmerized.
Located on the banks of river Cauvery, Hotel Mayura Riverview is the best place to complete your picturesque stay.
Facilities Available:
• 26 homelike cozy rooms, including 6 beautiful river-facing cottages.
• Multi-cuisine restaurant & bar.
• Coracle rides and boating on the river Cauvery.
ಮತ್ತೆ ಮತ್ತೆ ನೋಡಬೇಕೆನಿಸುವ ಒಂದು ಸುಂದರ ತಾಣವೆಂದರೆ ಹಂಪಿ. ಆಕರ್ಷಿಸುವ ಸೂರ್ಯಾಸ್ತ, ದಿಗಂತಗಳು, ವಾಸ್ತವಿಕವೆನಿಸುವ ಭೂದೃಶ್ಯಗಳು, ವಿಶಾಲ ಆಕಾಶ ಮತ್ತು ಭವ್ಯವಾದ ದೇವಾಲಯಗಳಿಗೆ ಹಂಪಿ ಹೆಸರುವಾಸಿಯಾಗಿದ್ದು, ಮನಃಶಾಂತಿಯನ್ನು ನೀಡುತ್ತದೆ. ಹಂಪಿಯ ವಿಶೇಷತೆಯನ್ನು ಪದಗಳಲ್ಲಿ ವರ್ಣಿಸಲು ಸಾದ್ಯವಿಲ್ಲ. ರಾಯಲ್ ಸೆಂಟರ್ ಮತ್ತು ಸೇಕ್ರೆಡ್ ಸೆಂಟರ್ ಎಂಬ ಎರಡು ಪ್ರದೇಶಗಳಲ್ಲಿರುವ ಪುರಾತನ ಅವಶೇಷಗಳನ್ನು ನೋಡಿದ್ದಲ್ಲಿ ಮನಸ್ಸಿಗೆ ಹಿಂದೆಂದೂ ಇಲ್ಲದ ಸಂತೋಷವಾಗುವುದು.
ಹಂಪಿಯಲ್ಲಿರುವ ಹೋಟೆಲ್ ಮಯೂರ ಭುವನೇಶ್ವರಿ, ಕಮಲಾಪುರ ಇದು ವಿಶ್ವ ಪರಂಪರೆಯ ತಾಣ ವ್ಯಾಪ್ತಿಯಲ್ಲಿರುವ ಏಕೈಕ ಹೋಟೆಲ್ ಆಗಿದೆ. ಇದು 30 ರೂಮ್ಗಳನ್ನೊಳಗೊಂಡ ನವೀಕರಿಸಲಾಗಿರುವ ಹೋಟೆಲ್ ಆಗಿದ್ದು, ಹವಾ ನಿಯಂತ್ರಣ ವ್ಯವಸ್ಥೆಯನ್ನು ಹೊಂದಿದೆ ಮತ್ತು 06 ವಸತಿ ನಿಲಯಗಳನ್ನು ಸಹ ಹೊಂದಿರುತ್ತದೆ.
ಬರುವ ಅತಿಥಿಗಳಿಗೆ ಕಾಂಟಿನೆಂಟಲ್ ಮತ್ತು ಭಾರತೀಯ ಪಾಕ ಪದ್ಧತಿಯೊಂದಿಗೆ ಹಂಪಿಯ ಸವಿರುಚಿಯನ್ನು ಆನಂದಿಸಬಹುದು ಮತ್ತು ಉತ್ತಮ ರೆಸ್ಟೋರೆಂಟ್ ವ್ಯವಸ್ಥೆಯನ್ನು ಪಡೆಯಬಹುದು.
ಸದರಿ ಹೋಟೆಲ್ನಲ್ಲಿ ಪ್ರವಾಸಿ ಮಾರ್ಗದರ್ಶಿಗಳೊಂದಿಗೆ ಪ್ರವಾಸಗಳನ್ನು ಕೈಗೊಳ್ಳುವ ವ್ಯವಸ್ಥೆ ಇರುತ್ತದೆ.
ರಜಾ ದಿನಗಳಲ್ಲಿ ಒಂದು ಹೊಸ ಸ್ಥಳವಾದ ಅನ್ವೇಷಣೆಯಲ್ಲಿದ್ದರೆ ವಿಜಯಪುರಕ್ಕೆ ಭೇಟಿ ನೀಡಿ. ಬಿಜಾಪುರದ ಆದಿಲ್ ಶಾಹಿ ರಾಜವಂಶದ ಆಡಳಿತವು ಐತಿಹಾಸಿಕವಾಗಿ ಶ್ರೀಮಂತ ಡೆಕ್ಕನ್ ಪ್ರದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ಅವರ ಕೊಡುಗೆಯ ಅನೇಕ ವಿಸ್ಮಯಕಾರಿ ಸ್ಮಾರಕಗಳಲ್ಲಿ ಗೋಲ್ಗುಂಬಜ್ ಸ್ಮಾರಕವು ಮೊದಲನೇ ಸ್ಥಾನವನ್ನು ಪಡೆದಿದ್ದು, ಭೂದೃಶ್ಯಗಳು, ಮಸೀದಿಗಳು, ಅರಮನೆಗಳು ಮತ್ತು ವಾಚ್–ಟವರ್ಗಳು ಬಿಜಾಪುರಕ್ಕೆ ವಿಶಿಷ್ಟವಾದ ಗುರುತನ್ನು ನೀಡುತ್ತದೆ.
ಹೋಟೆಲ್ ಮಯೂರ ಆದಿಲ್ ಶಾಹಿ ಬಿಜಾಪುರ ಘಟಕವು ಗೋಲ್ ಗುಂಬಜ್ ನಿಂದ ಸ್ವಲ್ಪ ದೂರದಲ್ಲಿದ್ದು, ಸ್ಮಾರಕದ ಅದ್ಭುತವಾದ ನೋಟವನ್ನು ನೀಡುತ್ತದೆ. ಈ ಹೋಟೆಲ್ ಘಟಕವು 4 ಡಬಲ್ ಬೆಡ್ ರೂಮ್ಗಳನ್ನು ಹೊಂದಿದೆ ಹಾಗೂ ಘಟಕಕ್ಕೆ ಆಗಮಿಸುವ ಅತಿಥಿಗಳಿಗೆ ಅತ್ಯುತ್ತಮ ಆಹಾರವನ್ನು ಒದಗಿಸಲು ರೆಸ್ಟೋರೆಂಟ್ನ್ನು ಹೊಂದಿರುತ್ತದೆ.
ಆಶ್ಚರ್ಯಕರ ನೋಟಗಳು, ಮನಸ್ಸಿಗೆ ಮುದ ನೀಡುವ ಹಾಗೂ ವಾಸ್ತವಿಕವಾದ ಅನುಭವಗಳಿಂದ ಆವೃತವಾಗಿರುವ ನಂದಿ ಬೆಟ್ಟ ಸ್ಥಳವು ಸ್ವರ್ಗದಂತೆ ಭಾಸವಾಗುತ್ತದೆ ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿರುವ ಅತ್ಯುತ್ತಮ ಸ್ಥಳವಾಗಿದೆ.
ನಂದಿ ಬೆಟ್ಟವು ನಗರದ ಸ್ವಂತ ಗಿರಿಧಾಮವಾಗಿದ್ದು, ಬೆಂಗಳೂರಿನಿಂದ ಕೇವಲ 60 ಕಿ.ಮೀ. ದೂರದಲ್ಲಿರುತ್ತದೆ.
ಸಮುದ್ರ ಮಟ್ಟದಿಂದ 1455 ಮೀಟರ್ ಎತ್ತರದಲ್ಲಿರುವ ಈ ಪ್ರದೇಶವು ಪ್ರಶಾಂತ ವಾತಾವರಣ ಮತ್ತು ತಾಜಾ ಗಾಳಿಯನ್ನು ನೀಡುವ ತಾಣವಾಗಿದ್ದು, ಬೇಸಿಗೆ ತಾಪ ಕಳೆಯಲು ಟಿಪ್ಪು ಸುಲ್ತಾನ ಮತ್ತು ಬ್ರಿಟಿಷರು ಈ ಸ್ಥಳವನ್ನು ಬಳಸುತ್ತಿದ್ದರು.
ನಂದಿ ಬೆಟ್ಟವು ಒಂದು ಪರಿಪೂರ್ಣ ಹಾಗೂ ಧೀರ್ಘ ಮನೋಲ್ಲಾಸ ತಾಣವಾಗಿದ್ದು, ಸಾಹಸಪ್ರಿಯರಿಗೆ ಉತ್ತಮ ಸ್ಥಳವಾಗಿದೆ. ಸದರಿ ಸ್ಥಳ ಎರಡು ಪ್ರಾಚೀನ ಶಿವನ ದೇವಾಲಯಗಳನ್ನು ಹೊಂದಿದ್ದು, ಒಂದು ದೇವಾಲಯವು ಬೆಟ್ಟದ ಪಾದದಲ್ಲಿ ಮತ್ತು ಇನ್ನೊಂದು ದೇವಾಲಯವು ಶಿಖರದಲ್ಲಿದ್ದು, ಬೆಟ್ಟಕ್ಕೆ ಆಕರ್ಷಕವಾಗಿದೆ.
ಹೋಟೆಲ್ ಮಯೂರ ನಂದಿಬೆಟ್ಟವು, ಬೆಟ್ಟದ ಶಿಖರದಲ್ಲಿ 17 ಕೊಠಡಿಗಳ ವಸತಿ ಗೃಹ, ಡಿಲೆಕ್ಸ್ ರೂಮ್ (ಗಾಂಧೀ ನಿಲಯ), ಡಬಲ್ ರೂಮ್ (ಗಾಂಧಿ ನಿಲಯ ನ್ಯೂ ಬ್ಲಾಕ್) ಹೊಂದಿದೆ. ಅಲ್ಲದೇ, ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ರೆಸ್ಟೋರೆಂಟ್ ವ್ಯವಸ್ಥೆಯನ್ನು ಹೊಂದಿರುತ್ತದೆ.
ಸೂಚನೆ: ಸಂಜೆ 6.00 ಗಂಟೆಯೊಳಗೆ ಚೆಕ್ ಇನ್ ಆಗಬೇಕಾಗಿರುತ್ತದೆ.
ಊಟಿ ಪ್ರದೇಶದ ಸೌಂದರ್ಯವು ಒಂದು ಸಮ್ಮೋಹನ ಅನುಭವವಾಗಿರುತ್ತದೆ. ಮಾನ್ಸೂನ್ ಸಮಯದಲ್ಲಿ ಒಂದು ಮಾಯಾಲೋಕದಂತೆ ರೂಪುಗೊಳ್ಳುವ ಗಿರಿದಾಮವು ಹೆಚ್ಚಿನ ಸಮಯ ಇರುವಂತೆ ಪ್ರೇರೆಪಿಸುತ್ತದೆ.
ಮೈಸೂರಿನಿಂದ ಕೇವಲ 03 ಗಂಟೆಗಳ ಪ್ರಯಾಣವಿರುವ ಊಟಿ ಪ್ರದೇಶವು ತಮಿಳುನಾಡಿನಲ್ಲಿದ್ದು, ರಜಾ ದಿನಗಳನ್ನು ಕಳೆಯುವವರಿಗೆ, ಅಲೆದಾಡಲು ಬಯಸುವವರಿಗೆ ಹಾಗೂ ನಗರ ಜೀವನದಿಂದ ಬೇಸತ್ತು ವಿಶ್ರಾಂತಿ ಪಡೆಯಬಯಸುವವರಿಗೆ ಊಟಿ ಜನಪ್ರಿಯ ಸ್ಥಳವಾಗಿರುತ್ತದೆ. ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಊಟಿ ಪ್ರದೇಶವು ಸುಂದರವಾದ ಸರೋವರ, ಜಲಪಾತ, ವಿಶಾಲವಾದ ಸಸ್ಯ ಉದ್ಯಾನವನ, ಅಚ್ಚಹಸಿರಿನ ಅರಣ್ಯ ಹಾಗೂ ಕಣಿವೆಗಳನ್ನು ಒಳಗೊಂಡಿದೆ.
ಹೋಟೆಲ್ ಮಯೂರ ಸುದರ್ಶನ ಊಟಿ ಘಟಕವು ಸುಂದರವಾದ ಹಸಿರು ಪರಿಸರ ಹೊಂದಿದ ಫರ್ನ್ ಬೆಟ್ಟದಲ್ಲಿದ್ದು, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಹತ್ತಿರವಿರುತ್ತದೆ. ಹೋಟೆಲ್ನಲ್ಲಿ ಒಟ್ಟು 03 ಮರದ ಕುಟೀರಗಳು, 02 ಹವಾನಿಯಂತ್ರಿತವಲ್ಲದ ಕೊಠಡಿಗಳು ಹಾಗೂ 20 ಹವಾನಿಯಂತ್ರಿತವಲ್ಲದ ಡಿಲೆಕ್ಸ್ ಬೆಡ್ ರೂಮ್ಗಳ ಇರುತ್ತವೆ.
ಅಲ್ಲದೇ, ಉತ್ತಮ ರೆಸ್ಟೋರೆಂಟ್ ಸೌಲಭ್ಯವಿದ್ದು, ಊಟಿ ಶೈಲಿಯ ಪಾಕಪದ್ಧತಿ ಹೊಂದಿರುತ್ತದೆ.
ಮುಂದಿನ ಬಾರಿ ಪ್ರವಾಸ ಕೈಗೊಳ್ಳುವ ಮನಸ್ಸಾದಲ್ಲಿ ಇಲ್ಲಿಗೆ ಭೇಟಿ ನೀಡಬಹುದು.
ಊಟಿ ಪ್ರದೇಶದ ಸೌಂದರ್ಯವು ಒಂದು ಸಮ್ಮೋಹನ ಅನುಭವವಾಗಿರುತ್ತದೆ. ಮಾನ್ಸೂನ್ ಸಮಯದಲ್ಲಿ ಒಂದು ಮಾಯಾಲೋಕದಂತೆ ರೂಪುಗೊಳ್ಳುವ ಗಿರಿದಾಮವು ಹೆಚ್ಚಿನ ಸಮಯ ಇರುವಂತೆ ಪ್ರೇರೆಪಿಸುತ್ತದೆ.
ಮೈಸೂರಿನಿಂದ ಕೇವಲ 03 ಗಂಟೆಗಳ ಪ್ರಯಾಣವಿರುವ ಊಟಿ ಪ್ರದೇಶವು ತಮಿಳುನಾಡಿನಲ್ಲಿದ್ದು, ರಜಾ ದಿನಗಳನ್ನು ಕಳೆಯುವವರಿಗೆ, ಅಲೆದಾಡಲು ಬಯಸುವವರಿಗೆ ಹಾಗೂ ನಗರ ಜೀವನದಿಂದ ಬೇಸತ್ತು ವಿಶ್ರಾಂತಿ ಪಡೆಯಬಯಸುವವರಿಗೆ ಊಟಿ ಜನಪ್ರಿಯ ಸ್ಥಳವಾಗಿರುತ್ತದೆ. ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಊಟಿ ಪ್ರದೇಶವು ಸುಂದರವಾದ ಸರೋವರ, ಜಲಪಾತ, ವಿಶಾಲವಾದ ಸಸ್ಯ ಉದ್ಯಾನವನ, ಅಚ್ಚಹಸಿರಿನ ಅರಣ್ಯ ಹಾಗೂ ಕಣಿವೆಗಳನ್ನು ಒಳಗೊಂಡಿದೆ.
ಹೋಟೆಲ್ ಮಯೂರ ಸುದರ್ಶನ ಊಟಿ ಘಟಕವು ಸುಂದರವಾದ ಹಸಿರು ಪರಿಸರ ಹೊಂದಿದ ಫರ್ನ್ ಬೆಟ್ಟದಲ್ಲಿದ್ದು, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಹತ್ತಿರವಿರುತ್ತದೆ. ಹೋಟೆಲ್ನಲ್ಲಿ ಒಟ್ಟು 03 ಮರದ ಕುಟೀರಗಳು, 02 ಹವಾನಿಯಂತ್ರಿತವಲ್ಲದ ಕೊಠಡಿಗಳು ಹಾಗೂ 20 ಹವಾನಿಯಂತ್ರಿತವಲ್ಲದ ಡಿಲೆಕ್ಸ್ ಬೆಡ್ ರೂಮ್ಗಳ ಇರುತ್ತವೆ.
ಅಲ್ಲದೇ, ಉತ್ತಮ ರೆಸ್ಟೋರೆಂಟ್ ಸೌಲಭ್ಯವಿದ್ದು, ಊಟಿ ಶೈಲಿಯ ಪಾಕಪದ್ಧತಿ ಹೊಂದಿರುತ್ತದೆ.
ಮುಂದಿನ ಬಾರಿ ಪ್ರವಾಸ ಕೈಗೊಳ್ಳುವ ಮನಸ್ಸಾದಲ್ಲಿ ಇಲ್ಲಿಗೆ ಭೇಟಿ ನೀಡಬಹುದು.
Time stands still in Mysuru!
The city weaves an aura around you and you feel as if you have always belonged here. Its beauty makes you savour every living moment to the fullest. Known as the ‘City of Palaces’ and the ‘Cultural City’, the majestic Mysuru was one of the longest reigning dynasties in Indian history.
Hotel Mayura Hoysala is located in the centre of the city and close to the railway station which directly offers convenience to visitors. Nestled in a heritage building, the hotel offers gracious accommodation in the form of 31 Air-conditioned double bedrooms, 10 standard double bedrooms and 11 Family Dormitory Rooms. The warm hospitable hotel has a Bar and Restaurant, a Garden Cafe and Conference/Party Hall with a seating capacity of 50 pax, offering guests a homely dining experience.